• Sat. May 18th, 2024

PLACE YOUR AD HERE AT LOWEST PRICE

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ‘ದುಡಿವ ಜನರ ಮಹಾಧರಣಿ’ಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.

ಇಂದು ಧರಣಿ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಆಗಮಿಸಿದ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌, ಡಿಸೆಂಬರ್ 19ರಂದು ಸಂಜೆ 4 ಗಂಟೆಗೆ ರೈತ, ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಲು ಸಿಎಂ ಸಮಯ ನಿಗದಿ ಮಾಡಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿಗಳು ಸಭೆ ನಡೆಸಲು ಒಪ್ಪಿರುವ ಪತ್ರವನ್ನು ಸಂಯುಕ್ತ ಹೋರಾಟ ಸಮಿತಿ ಮುಖಂಡರಿಗೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೃಷ್ಣ ಬೈರೇಗೌಡ ಅವರು ನಿನ್ನೆ ನಿಮ್ಮನ್ನು ಭೇಟಿಯಾದ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದಾರೆ. ರೈತ, ಕಾರ್ಮಿಕರ ಮುಖಂಡರ ಜೊತೆಗೆ ಸಭೆ ನಡೆಸಲು ಮೂರು ನಾಲ್ಕು ಗಂಟೆಗಳಾದರೂ ಬೇಕೆಂದು ಅವರು ತಿಳಿದುಕೊಂಡಿದ್ದಾರೆ.

ಡಿಸೆಂಬರ್ 19 ರಂದು ಸಂಜೆ 4 ಗಂಟೆಗೆ ಸಮಯ ನಿಗದಿ ಮಾಡಿದ್ದಾರೆ. ಹೋರಾಟಗಾರರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ತಿಳಿದಿದೆ. ದೊಡ್ಡ ಶಕ್ತಿ ಪ್ರದರ್ಶನ ಮಾಡಿದ್ದೀರಿ. ಕೇಂದ್ರ ಸರ್ಕಾರ ಕೂಡಾ ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂಬ ನಂಬಿಕೆ ಇದೆ ಎಂದು ನಸೀರ್ ಅಹ್ಮದ್ ಹೇಳಿದರು.

ನಿನ್ನೆ ಮಹಾಧರಣಿ ಸ್ಥಳಕ್ಕೆ ಮುಖ್ಯಮಂತ್ರಿಗಳ ಪರವಾಗಿ ಭೇಟಿ ನೀಡಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಧರಣಿ ನಿರತರ ಹಕ್ಕೊತ್ತಾಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಲು ಒಪ್ಪಿದ್ದಾರೆ. ಶೀಘ್ರದಲ್ಲೇ ಹೋರಾಟಗಾರರೊಂದಿಗೆ ಸಭೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದಿದ್ದರು.

ನವೆಂಬರ್ 26 ಭಾನುವಾರದಿಂದ ಪ್ರಾರಂಭವಾದ ದುಡಿವ ಜನರ 72 ಗಂಟೆಗಳ ಮಹಾಧರಣಿ ಇಂದು (ನ.28) ಸಮಾಪ್ತಿಯಾಗಲಿದೆ.

Related Post

ಎಪಿಎಂಸಿ ಕಾರ್ಯದರ್ಶಿ ವಿಜಯಲಕ್ಷ್ಮಿ ವಜಾಗೊಳಿಸಲು ತರಕಾರಿ ಮಂಡಿ ಮಾಲೀಕರ ಒತ್ತಾಯ. ಆರೋಪ ನಿರಾಕರಿಸಿದ ಎಪಿಎಂಸಿ ಕಾರ್ಯದರ್ಶಿ
ಯರಗೋಳ್ ಗ್ರಾಮದಲ್ಲಿ “ದಿ 1979 ಅನ್ ಟೋಲ್ಡ್ ಸ್ಟೋರಿ” ಸಿನಿಮಾದ ಅಂತಿಮ ಚಿತ್ರೀಕರಣ
ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ

Leave a Reply

Your email address will not be published. Required fields are marked *

You missed

error: Content is protected !!