• Thu. May 16th, 2024

PLACE YOUR AD HERE AT LOWEST PRICE

ಬೆಂಗಳೂರು ಮಾಜಿ ಮೇಯರ್ ವಿಜಯ ಕುಮಾರ್ ಪುತ್ರ ಕೆ.ವಿ.ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಿಸಿದ್ದಾರೆ.

ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ ಟಿಕೆಟ್ ಹಂಚಿಕೆ ಕಗ್ಗಂಟಾಗಿತ್ತು. ಇಬ್ಬರ ಜಗಳ ಮೂರನೇ ವ್ಯಕ್ತಿಗೆ ಲಾಭ ಎಂಬಂತೆ ಕೋಲಾರಕ್ಕೆ ಹೊರಗಿನ ಹೊಸ ಮುಖಕ್ಕೆ ಅವಕಾಶ ನೀಡಲಾಗಿದೆ.

ಗೌತಮ್ ಪರಿಶಿಷ್ಟ ಜಾತಿ ಎಡಗೈ ಸಮಾಜಕ್ಕೆ ಸೇರಿದವರಾಗಿದ್ದು, ರಾಜ್ಯದ ಐದು ಕ್ಷೇತ್ರಗಳಲ್ಲಿ ಈಗಾಗಲೇ ಬಲಗೈ ಸಮುದಾಯಕ್ಕೆ ಮೂರು ಸ್ಥಾನಗಳನ್ನು ನೀಡಲಾಗಿದೆ.

ಇನ್ನುಳಿದ ಎರಡು ಕ್ಷೇತ್ರಗಳು ಎಡಗೈ ಸಮಾಜಕ್ಕೆ ನೀಡಬೇಕು ಎಂಬ ಕೂಗು ಇತ್ತು. ಈಗ ಕೋಲಾರ ಕ್ಷೇತ್ರಕ್ಕೆ ಎಡಗೈ ಸಮಾಜಕ್ಕೆ ನೀಡಲಾಗಿದ್ದು ಎರಡು ಸ್ಥಾನಗಳನ್ನು ನೀಡಿದಂತಾಗುತ್ತದೆ.

Related Post

ಶಿಕ್ಷಕರ ಸಮಸ್ಯೆಗಳನ್ನು ಬಗೆಹರಸದೆ, ಶಿಕ್ಷಕರಿಗೆ ದ್ರೋಹವೆಸಗಿದ ಎಂ.ಎಲ್.ಸಿ. ವೈ.ಎ.ನಾರಾಯಣಸ್ವಾಮಿ : ರುಪ್ಸಾ ಅಧ್ಯಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಆರೋಪ
ಜೆಡಿಎಸ್‌ ಬಿಜೆಪಿ ಒಂದಾಗಿ ಸಂವಿಧಾನಕ್ಕೆ ಅಪಾಯ ಎಚ್ವತ್ತು ಕಾಂಗ್ರೆಸ್ ಬೆಂಬಲಿಸಿ: ಬೈರತಿ ಸುರೇಶ್
ವಚನ ಭ್ರಷ್ಟ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟಕ್ಕೆ ಮತ ಕೇಳುವ ನೈತಿಕತೆ ಇಲ್ಲ-ಕೆ.ವಿ.ಗೌತಮ್

Leave a Reply

Your email address will not be published. Required fields are marked *

You missed

error: Content is protected !!