*ವಿದ್ಯುತ್ ಸಮಸ್ಯೆ ಇತ್ಯರ್ಥ ಪಡಿಸಿ:ರೈತ ಸಂಘ ಮನವಿ.*
ಕೆಜಿಎಫ್:ಕೆಜಿಎಫ್ ತಾಲ್ಲೂಕಿನಲ್ಲಿ ರೈತರ ವಿದ್ಯುತ್ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಬೇತಮಂಗಲ ವಿದ್ಯುತ್ ಇಲಾಖೆಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಬೇತಮಂಗಲದ ವಿದ್ಯುತ್ ಇಲಾಖೆಗೆ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ವಿದ್ಯುತ್ ಇಲಾಖೆಯಿಂದ ಇತ್ತೀಚಿಗೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿವರಿಸಿದರು.…